ಡಿಶ್ ರಿಪೇರಿ ಮಾಡುತ್ತಿದ್ದವನಿಗೆ ಸ್ಥಳೀಯರಿಂದ ಧರ್ಮದೇಟು

ಚಿಕ್ಕಮಗಳೂರು: ಮಹಿಳೆಯರಿಗೆ ನಂಬರ್ ಕೊಟ್ಟು ಕಾಲ್ ಮಾಡುವಂತೆ ಪೀಡಿಸುತ್ತಿದ್ದವನಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಟ್ಟೆಮನೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಶೀರ್ ಎಂಬಾತ ಮಹಿಳೆಯರಿಗೆ ಮೊಬೈಲ್ ನಂಬರ್ ಕೊಟ್ಟು ಕಾಲ್ ಮಾಡುವಂತೆ ಟಾರ್ಚರ್ ನೀಡುತ್ತಿದ್ದ. ಅದೇ ರೀತಿ ಕಟ್ಟೆಮನೆ ಗ್ರಾಮದ ರಮೇಶ್ ಎಂಬವರ ಪತ್ನಿಗೆ ಬಶೀರ್ ನಂಬರ್ ನೀಡಿದ್ದು, ಕಾಲ್ ಮಾಡುವಂತೆ ಪೀಡಿಸುತ್ತಿದ್ದ. ತನ್ನ ಹೆಂಡತಿಗೆ ಮೊಬೈಲ್ ನಂಬರ್ ನೀಡಿದ ಹಿನ್ನೆಲೆ ರಮೇಶ್ ಆತನನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿ ಹೊಡೆದಿದ್ದಾರೆ.

ಬಶೀರ್ ಜಯಪುರದಲ್ಲಿ ಡಿಶ್ ರಿಪೇರಿ ಕೆಲಸ ಮಾಡುತ್ತಿದ್ದ. ಪತ್ನಿಗೆ ಕಾಲ್ ಮಾಡುವಂತೆ ಕಿರುಕುಳ ನೀಡುತ್ತಿದ್ದ ಈತನಿಗೆ ರಮೇಶ್ ಹಾಗೂ ಸ್ಥಳೀಯರು ಧರ್ಮದೇಟು ನೀಡಿ ರಿಪೇರಿ ಮಾಡಿದ್ದಾರೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.