ಸಿದ್ದಾಪುರ ಹೆಸ್ಕಾಂ ಉಪ ವಿಭಾಗೀಯ ಕಾರ್ಯಾಲಯದಲ್ಲಿ ಗ್ರಾಹಕರೊಂದಿಗೆ ಸಂವಾದ ಸಭೆ

ಸಿದ್ದಾಪುರ : ಪಟ್ಟಣದ ಹೆಸ್ಕಾಂ ಉಪ ವಿಭಾಗೀಯ ಕಾರ್ಯಾಲಯದಲ್ಲ್ಲಿ ಶನಿವಾರ ಗ್ರಾಹಕರೊಂದಿಗೆ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಯಿತು
ಉತ್ತರ ಕನ್ನಡ ಜಿಲ್ಲಾ ಅಧಿಕ್ಷಕ ದೀಪಕ್ ಕಾಮತ್
ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಹಕರಿಗೆ ಉಂಟಾಗುತ್ತಿರುವ ಸಮಸ್ಯೆಯನ್ನು ಅನಿಸಲಾಯಿತು . ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು ಸಭೆಯಲ್ಲಿ ಗ್ರಾಹಕರು ತಮ್ಮ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಮಸ್ಯೆಗಳನ್ನು ಪರಿಹರಿಸಲೆಂದೆ ಈ ಸಭೆಯನ್ನು ನಡೆಸಲಾಗುತ್ತಿದ್ದು, ಆಧ್ಯಕ್ಷತೆಯಡಿ ಸಮಸ್ಯೆಗಳ ಬಗೆಹರಿಸಲು ಕ್ರಮವನ್ನು ಕೈಗೊಳ್ಳಲಾಗುವುದೆಂದು ಹೇಳಿದರು.
ಗ್ರಾಹಕರಿಂದ ಬಂದ ಸಮಸ್ಯೆಗಳನ್ನು ಪಟ್ಟಿ ಮಾಡಿ ಶೀಘ್ರದಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು

ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ನಾಗರಾಜ್ ಪಾಟೀಲ್ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಹಕರು ತಮ್ಮ ತಮ್ಮ ಕುಂದುಕೊರತೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.