‘ನಾನು ರಾಜೀನಾಮೆ ನೀಡಲೂ ಸಿದ್ಧ’ ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ್ರಾ ರೇಣುಕಾಚಾರ್ಯ.?!

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜಕೀಯ ಮುಖಂಡರು ಈ ಘಟನೆಯನ್ನು ಖಂಡಿಸುತ್ತಿರುವ ಬೆನ್ನಲ್ಲೇ ಇತ್ತ ರೇಣುಕಾಚಾರ್ಯ ಒಂದು ಹೆಜ್ಜೆ ಮುಂದೆ ಹೋಗಿ ‘ನಾನು ರಾಜಿನಾಮೆ ನೀಡಲು ಸಿದ್ಧ’ ಎಂದು ಹೇಳಿಕೆ ನೀಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಆ ಮೂಲಕ ಸ್ವಪಕ್ಷದವರ ವಿರುದ್ಧವೇ ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೇಣುಕಾಚಾರ್ಯ ಹೇಳಿದ್ದೇನು.?

ಹಿಂದುಗಳು ನಮ್ಮ ಮೇಲಿಟ್ಟಿರುವ ಭರವಸೆ ಉಳಿಸಿಕೊಳ್ಳಲು ಸಾಧ್ಯವಾಗದೇ ಇದ್ರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅವರು ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳಬೇಕೆಂದರೆ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಾನು ಸರ್ಕಾರದಲ್ಲಿ ಮುಂದುವರಿಯುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ರು.