ವಿಚಾರಣೆ ವೇಳೆ ಸಿಸಿಬಿ ಮುಂದೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರರು

ಬೆಂಗಳೂರು, (ಜುಲೈ 19): ಬೆಂಗಳೂರಿನಲ್ಲಿ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಶಂಕಿತ ಉಗ್ರರ ಪ್ಲ್ಯಾನ್ ವಿಫಲಗೊಳಿಸಿದ್ದಾರೆ. ಮಡಿವಾಳದ FSL ಆವರಣದ ಇಂಟ್ರಾಗೇಷನ್ ಸೆಲ್​ನಲ್ಲಿ ವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಈ ವೇಳೆ ಸ್ಫೋಟಕ ಅಂಶಗಳನ್ನು ಬಾಯ್ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಸ್​​, ಹೋಟೆಲ್​​, ಬಸ್​​ ನಿಲ್ದಾಣಗಳಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು ಎಂದು ವಿಚಾರಣೆ ವೇಳೆ ಶಂಕಿತ ಉಗ್ರರು ಮುಂದೆ ಬಾಯ್ಬಿಟ್ಟಿದ್ದಾರೆ. ಇನ್ನು ಈ ಪ್ರಕರಣ ಸಂಬಂಧ ಒಟ್ಟು 7 ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ.  ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಯುಎಪಿಎ, 120 B, ಶಸ್ತ್ರಾಸ್ತ್ರ ನಿಗ್ರಹ ಕಾಯ್ದೆ ಸೆಕ್ಷನ್​​​​​​​ 122 ,121ಯಡಿ ಪ್ರಕರಣ ದಾಖಲಾಗಿದೆ.

2008ರ ಬೆಂಗಳೂರು ಸರಣಿ ಸ್ಫೋಟದ ಆರೋಪಿ ಟಿ.ನಜೀರ್​ ಎ1 ಆರೋಪಿಯಾಗಿದ್ದು, ಸದ್ಯ ಈತ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೈದ್ ಎ2 ಆರೋಪಿಯಾಗಿದ್ದಾನೆ. ಇನ್ನು ಬೆಂಗಳೂರಿನಲ್ಲಿ ಬಂಧಿತರಾಗಿರುವ ಐವರಲ್ಲಿ ಸುಹೇಲ್​ ಎ3, ಉಮರ್ ಎ4, ಜಾಹಿದ್​ ಎ5, ಮುದಾಸಿರ್​ ಎ6, ಫೈಜರ್​ 7ನೇ ಆರೋಪಿ ಎಂದು ಕೇಸ್ ದಾಖಲಾಗಿದೆ.

ಬಂಧಿತ ಶಂಕಿತ ಭಯೋತ್ಪಾದಕರು ಬೆಂಗಳೂರಿನ ಸುಲ್ತಾನ್​ ಪಾಳ್ಯದ ಕನಕನಗರದ ಪದ್ಮಾವತಿ ಎಂಬುವವರ ಮನೆಯಲ್ಲಿ ಕಳೆದ ಎರಡ್ಮೂರು ತಿಂಗಳಿಂದ ಬಾಡಿಗೆಗೆ ವಾಸವಿದ್ದರು. ಇನ್ನು ಬಂಧಿತ ಆರೋಪಿಗಳಿಂದ 7 ಪಿಸ್ತೂಲ್​​, 12 ಫೋನ್​ಗಳು, 45 ಜೀವಂತ ಗುಂಡು, ವಾಕಿಟಾಕಿ ಸೇರಿ ಹಲವು ವಸ್ತುಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಪ್ರಕರಣದ 2ನೇ ಆರೋಪಿ ಜುನೈದ್ ವಿರುದ್ಧದ ಪ್ರಕರಣಗಳು

  • 2017 ಕಿಡ್ನಾಪ್ ಅಂಡ್ ಮರ್ಡರ್ ಕೇಸ್.
  • 2020 ರಕ್ತ ಚಂದನ ಕೇಸ್,
  • 2021 ಡರೋಡೆಗೆ ಸಂಚು ಕೇಸ್
  • 2021 ದರೋಡೆಗೆ ಸಂಚು. ಕೇಸ್.
  • 2021 ರಿಂದ ಜುನೈದ್ ಜೈಲಿನಿಂದ ಬಿಡುಗಡೆಯಾಗಿದ್ದು, ಸದ್ಯ ಈತ ವಿದೇಶದಲ್ಲಿ ಇದ್ದಾನೆ ಎಂದು ತಿಳಿದುಬಂದಿದೆ.