ಯಲ್ಲಾಪುರದಲ್ಲೂ ಯುವ ಮೋರ್ಚಾ ಪದಾಧಿಕಾರಿಗಳ ರಾಜೀನಾಮೆ.!

ಯಲ್ಲಾಪುರ: ಬಿಜೆಪಿ ತಾಲೂಕು ಯುವ ಮೋರ್ಚಾ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.ಈ ಕುರಿತು ಯುವಮೋರ್ಚಾ ತಾಲೂಕು ಅಧ್ಯಕ್ಷ ಪ್ರದೀಪ ಯಲ್ಲಾಪುರಕರ್ ಪತ್ರಿಕಾ ಹೇಳಿಕೆ ನೀಡಿ, ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಾಗೂ ಆರ್.ಎಸ್.ಎಸ್ ಸ್ವಯಂ ಸೇವಕ ರಮೇಶ ಹುಬ್ಬಳ್ಳಿ ಅವರ ಮೇಲಿನ ಹಲ್ಲೆ ಖಂಡಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ತಾಲೂಕು ಅಧ್ಯಕ್ಷ ಪ್ರದೀಪ ಯಲ್ಲಾಪುರಕರ್ ಹಾಗೂ ಪದಾಧಿಕಾರಿಗಳು, ಜಿಲ್ಲಾ ಉಪಾಧ್ಯಕ್ಷ ಸೋಮೇಶ್ವರ ನಾಯ್ಕ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ರಘುಪತಿ ಹೆಗಡೆ ಕಂಪ್ಲಿ ಸಹ ರಾಜೀನಾಮೆ ನೀಡಿದ್ದಾರೆ. ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಘು ಕುಂದರಗಿ ಅವರೂ ರಾಜೀನಾಮೆ ನೀಡಿದ್ದಾರೆ.