ಮಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ.!

Big Breaking News

ಮಂಗಳೂರು: ಪ್ರವೀಣ್ ಹತ್ಯೆಯಾದ ಬೆನ್ನಲ್ಲೇ ದಕ್ಷಿಣ ಕನ್ನಡ ಮತ್ತೊಮ್ಮೆ ಬೆಚ್ಚಿ ಬಿದ್ದಿದೆ. ಸುರತ್ಕಲ್ ನಲ್ಲಿ ಫಾಸಿಲ್ ಎಂಬ ವ್ಯಕ್ತಿಯ ಕೊಲೆಯಾಗಿದೆ. ಆದರೆ ಇದು ಕೋಮು ದ್ವೇಷಕ್ಕೆ ನಡೆದ ಕೊಲೆಯಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರೇಮದ ವಿಷಯಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ.

ಲವ್ ವಿಷಯದಲ್ಲಿ ಸುನ್ನಿ ಮುಸಲ್ಮಾನ ಸಮುದಾಯದ ತಂಡ ಮತ್ತು ಷಿಯಾ ಮುಸಲ್ಮಾನ ಸಮುದಾಯದ ತಂಡದ ನಡುವ ಸುರತ್ಕಲ್ ನಲ್ಲಿ ಮಾರಾಮಾರಿ ನಡೆದಿದೆ.

ಮೇಲ್ಜಾತಿ ಸುನ್ನಿ ಮುಸಲ್ಮಾನರ ಯುವತಿಯನ್ನು ಪ್ರೀತಿಸಿದ ಕೆಳಜಾತಿಯ ಷಿಯಾ ಮುಸಲ್ಮಾನ ಯುವಕನ ಮೇಲೆ ತಲವಾರು ದಾಳಿ ನಡೆಸಿ ಸುನ್ನಿ ಮುಸಲ್ಮಾನರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ಈಗಾಗಲೇ ಬಜ್ಪೆ, ಪಣಂಬೂರು, ಮುಲ್ಕಿ, ಸುರತ್ಕಲ್ ನಲ್ಲಿ ಈಗಾಗಲೇ ನಿಷೇಧಾಜ್ಞೆ ಹೊರಡಿಸಲಾಗಿದೆ. ನಾಲ್ವರು ಕಾರಿನಲ್ಲಿ ಬಂದು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಪೊಲೀಸರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.