ತುಂಗಭದ್ರಾ ನದಿಯಲ್ಲಿ ತೇಲಿಬಂದ ಅಪರಿಚಿತ ವ್ಯಕ್ತಿಯ ಮೃತದೇಹ: ಆಕಸ್ಮಿಕವಾಗಿ ನೀರಿಗೆ ಬಿದ್ದಿರುವ ಶಂಕೆ

ದಾವಣಗೆರೆ, ಜುಲೈ 23: ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆ ಓರ್ವ ಅಪರಿಚಿತ ಪುರುಷ ಮೃತದೇಹ ತೇಲಿಬಂದಿರುವಂತಹ ಘಟನೆ ಜಿಲ್ಲೆಯ ಹರಿಹರದ ರಾಘವೇಂದ್ರ ಮಠದ ಬಳಿ ಶವ ಪತ್ತೆ ಆಗಿದೆ. ಮೃತ ವ್ಯಕ್ತಿ ಆಕಸ್ಮಿಕವಾಗಿ ತುಂಗಭದ್ರಾ ನದಿಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಹರಿಹರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.