ಯಲ್ಲಾಪುರದ ಬೇಡ್ತಿ ಬಳಿ ಬೈಕ್‌ ಮತ್ತು ಬಸ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು..ಇಬ್ಬರಿಗೆ ಗಂಭೀರ ಗಾಯ

ಯಲ್ಲಾಪುರ : ಬೈಕ್‌ ಮತ್ತು ಬಸ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಯಲ್ಲಾಪುರ-ಶಿರಸಿ ರಾಷ್ಟ್ರೀಯ ಹೆದ್ದಾರಿಯ ಬೇಡ್ತಿ ಸೇತುವೆ ನಡೆದಿದೆ.

ಯಲ್ಲಾಪುರದಿಂದ ಜೋಗ್‌ ಫಾಲ್ಸ್‌ ನೋಡಲು ತೆರಳುತ್ತಿದ್ದಾಗ ಶಿರಸಿಯಿಂದ ಯಲ್ಲಾಪುರಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್‌ಗೆ ಡಿಕ್ಕಿಯಾಗಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್‌ ಸವಾರ ಕಿರಣ ದಿವಾಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಜಯ್‌ ಹಾಗೂ ಮನೋಜ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ ಸವಾರರು ದಾವಣಗೆರೆ ಪಟ್ಟಣದ ವಿನೋಬ ನಗರದವರಾಗಿದ್ದು ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ.


ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ..