ಅಂಬಿಕಾನಗರದಲ್ಲಿ ವ್ಯಕ್ತಿ ಆತ್ಮಹತ್ಯೆ

ದಾಂಡೇಲಿ : ತಾಲ್ಲೂಕಿನ ಅಂಬಿಕಾನಗರದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಅಂಬಿಕಾನಗರದ ಬಜಾರ್ ಕಾಂಪ್ಲೆಕ್ಸ್ ಇಲ್ಲಿಯ ನಿವಾಸಿ 35 ವರ್ಷ ವಯಸ್ಸಿನ ಮಂಜುನಾಥ್ ನಟರಾಜ ಆಚಾರಿ ಎಂಬಾತನೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಈತನೂ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ತನ್ನ ಮನೆಯ ಕೊಠಡಿಯಲ್ಲಿ ನೇಣಿಗೆ ಕೊರೊಳೊಡ್ಡಿದ್ದಾನೆ. ಈ ಬಗ್ಗೆ ಅಂಬಿಕಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂಬಿಕಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.