ಅಂಬೇವಾಡಿಯಲ್ಲಿ ಮನೆ ಮೇಲೆ ಉರುಳಿದ ಬೃಹತ್ ಗಾತ್ರದ ಮರ : ಹಾನಿ

ದಾಂಡೇಲಿ : ನಗರದ ಅಂಬೇವಾಡಿಯ ಕೆ.ಎಚ್.ಬಿ ಕಾಲೋನಿಯಲ್ಲಿ ಮನೆಯೊಂದರ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಹಾನಿಯಾದ ಘಟನೆ ಇಂದು ಸೋಮವಾರ ಬೆಳಿಗ್ಗೆ ನಡೆದಿದೆ.

ಅಂಬೇವಾಡಿಯ ಕೆ.ಚ್.ಬಿ ಕಾಲೋನಿಯ ನಿವಾಸಿ ಆನಂದ್ ಪ್ರಸಾದ್ ಎಂಬವರ ಮನೆ ಮೇಲೆ ಮರ ಉರುಳಿ ಬಿದ್ದಿದ್ದು, ಮನೆಗೆ ತೀವ್ರ ಹಾನಿಯಾಗಿದೆ. ಮನೆ ಮಂದಿಯೆಲ್ಲ ಮನೆಯ ಮುಂಭಾಗದಲ್ಲಿದ್ದ ಹಿನ್ನಲೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ನಗರದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಘಟನೆ ಸಂಭವಿಸಿದೆ.