ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷನ ವಿರುದ್ಧ ಸಾಲು ಸಾಲು ಆರೋಪ; ಸರ್ಕಾರದಿಂದ ಮತ್ತೊಂದು ನೋಟಿಸ್

ಬೆಂಗಳೂರು, ಜುಲೈ 26: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಂತ ಎ ತಿಮ್ಮಯ್ಯ ಅವರ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿ ಬಂದಿವೆ. ಈ ಹಿನ್ನಲೆ ಸರ್ಕಾರದಿಂದ ಕೆಎಸ್ ಪಿಸಿಬಿ ಚೇರ್ ಮನ್ ಗೆ ಮತ್ತೊಂದು ನೋಟಿಸ್ ನೀಡಲಾಗಿದೆ. ಶಾಂತ ಎ ತಿಮ್ಮಯ್ಯ ಅವರ ವಿರುದ್ಧ ಎರಡು ಗಂಭೀರ ಆರೋಪಗಳು ಕೇಳಿಬಂದಿದ್ದು ಈ ಹಿಂದೆಯೇ ನೋಟಿಸ್ ಜಾರಿಯಾಗಿತ್ತು. ಈಗ ಮತ್ತೊಂದು ನೋಟಿಸ್ ಜಾರಿಯಾಗಿದೆ.

ಶಾಂತ ಎ ತಿಮ್ಮಯ್ಯ ವಿರುದ್ಧ ಕಾನೂನು ಬಾಹಿರವಾಗಿ ಹುದ್ದೆ ಅಲಂಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಇದರ ಜೊತೆಗೆ ಮಂಡಳಿಯ ಪ್ರಚಾರಕ್ಕಾಗಿ ಜಾಹೀರಾತು ನೀಡುವಲ್ಲೂ 17 ಕೋಟಿ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಸರ್ಕಾರದಿಂದ ಈ ಹಿಂದೆಯೇ ನೋಟಿಸ್ ಜಾರಿಯಾಗಿತ್ತು. ಇದೀಗ ರಾಜ್ಯ ಸರ್ಕಾರ ಶಾಂತ ಎ ತಿಮ್ಮಯ್ಯಗೆ ಮತ್ತೊಂದು ನೋಟಿಸ್ ಜಾರಿ ಮಾಡಿದೆ. ಸರ್ಕಾರದ ಗಮನಕ್ಕೆ ತರದೇ ಸದಸ್ಯ ಕಾರ್ಯದರ್ಶಿ ಸೂರಿ ಪಾಯಲ್ ನೇಮಕ ಹಾಗೂ ಅವರನ್ನ ಕೆಲವೇ ದಿನಗಳಲ್ಲಿ ಆ ಹುದ್ದೆಯಿಂದ ತೆರುವುಗೊಳಿಸಿದ್ದಕ್ಕೆ ನೋಟಿಸ್ ನೀಡಿದೆ.

ಸರ್ಕಾರದ ಪೂರ್ವಾನುಮತಿ ಪಡೆಯದೇ ಪದೇ ಪದೇ ಸದಸ್ಯ ಕಾರ್ಯದರ್ಶಿಗಳ ನೇಮಕದ ಬಗ್ಗೆ ಹಾಗೂ ಕರ್ತವ್ಯಲೋಪವೆಸಗಿದ್ದು ಒಂದು ವಾರದೊಳಗೆ ಸ್ಪಷ್ಟ ಉತ್ತರ ನೀಡುವಂತೆ ಅರಣ್ಯಜೀವಿಪರಿಸ್ಥಿತಿ ಹಾಗೂ ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿಯಿಂದ ನೋಟಿಸ್ ಜಾರಿ ಮಾಡಲಾಗಿದೆ.