ಹಿರಿಯ ಪತ್ರಕರ್ತ, ಅರ್ಥಧಾರಿ, ಅಂಕಣಕಾರ ಅನಂತ ವೈದ್ಯ ಅವರಿಗೆ ನುಡಿನಮನ

ಯಲ್ಲಾಪುರ:
ಹಿರಿಯ ಪತ್ರಕರ್ತ, ಅರ್ಥಧಾರಿ, ಅಂಕಣಕಾರ ಅನಂತ ವೈದ್ಯ ಅವರಿಗೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ನುಡಿನಮನ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಕೆ.ಎಸ್.ಭಟ್ಟ ಆನಗೋಡ ಮಾತನಾಡಿ, ಅನಂತ ವೈದ್ಯರ ಮೇರು ವ್ಯಕ್ತಿತ್ವ ಆದರ್ಶಪ್ರಾಯವಾಗಿದೆ ಎಂದರು.
ಜಿಲ್ಲಾ ಕಾರ್ಯದರ್ಶಿ ನರಸಿಂಹ ಸಾತೊಡ್ಡಿ ಮಾತನಾಡಿ, ವೈದ್ಯ, ಪತ್ರಕರ್ತರಾಗಿ, ಸಾಹಿತಿಗಳಾಗಿ, ಉಪನ್ಯಾಸಕರಾಗಿ ವಿವಿಧ ನೆಲೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾದರಿಯ ವ್ಯಕ್ತಿತ್ವ ಹೊಂದಿದ್ದರು ಎಂದರು.
ಸಾಹಿತಿ ಸುಬ್ರಾಯ ಬಿದ್ರೆಮನೆ,
ಸಂಘದ ಕಾರ್ಯದರ್ಶಿ ಶ್ರೀಧರ ಅಣಲಗಾರ, ಜಿಲ್ಲಾ ಸಮಿತಿ ಸದಸ್ಯೆ ಪ್ರಭಾವತಿ ಗೋವಿ, ಸದಸ್ಯರಾದ ಜಯರಾಜ ಗೋವಿ, ವಿಜಯಕುಮಾರ್ ನಾಯ್ಕ, ಪತ್ರಕರ್ತ ಕೇಬಲ್ ನಾಗೇಶ ನುಡಿನಮನ ಸಲ್ಲಿಸಿದರು.