ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಲ್ಲಿ ಸೋಲಾರ್ ಟೆಕ್ನಿಷಿಯನ್ ತರಬೇತಿಗೆ ಚಾಲನೆ

ಹಳಿಯಾಳ : ಪಟ್ಟಣದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಲ್ಲಿ ಸೋಲಾರ್ ಟೆಕ್ನಿಷಿಯನ್ ತರಬೇತಿಗೆ ಮಂಗಳವಾರ ಚಾಲನೆಯನ್ನು ನೀಡಲಾಯಿತು.

ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ವಿಡಿಐಟಿ ಕಾಲೇಜಿನ ಉಪನ್ಯಾಸಕರಾದ ಶಂಕರ್ ಬಡಿಗೇರ್ ಅವರು ಇವತ್ತಿನ ದಿನಮಾನದಲ್ಲಿ ಸೋಲಾರ್ ದುರಸ್ತಿ ಹಾಗೂ ನಿರ್ವಹಣಾ ಕಾರ್ಯಕ್ಕೆ ಬಹು ಬೇಡಿಕೆಯಿದೆ. ಈ ನಿಟ್ಟಿನಲ್ಲಿ ಈ ತರಬೇತಿ ಉಪಯುಕ್ತವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ನಿರ್ದೇಶಕರಾದ ಪ್ರಶಾಂತ ಬಡ್ಡಿ ಅವರು ಮಾತನಾಡಿ ಸೋಲಾರ ಟೆಕ್ನಿಷಿಯನ್ ತರಬೇತಿಯ ಸಂಪೂರ್ಣ ಮಾಹಿತಿ ಮತ್ತು ಕೌಶಲ್ಯವನ್ನು ಪಡೆದುಕೊಂಡು ಸ್ವ-ಉದ್ಯೋಗಿಗಳಾಗುವಂತೆ ಕರೆ‌ ನೀಡಿದರು.

ಸಂಸ್ಥೆಯ ತರಬೇತಿ ಸಂಯೋಜಕರಾದ ಕೊಂಡು ಕೊಕರೆ ಸ್ವಾಗತಿಸಿದರು. ಉಪನ್ಯಾಸಕ ಮಹೇಶ ವಂದಿಸಿದರು.