ಜನಸಂಖ್ಯೆಯನ್ನು ಮಾನವ ಸಂಪನ್ಮೂಲವಾಗಿ ರೂಪಿಸಿದಾಗ ಅಭಿವೃದ್ಧಿ ಸಾಧ್ಯ – ಶಿವರಾಮ ಹೆಬ್ಬಾರ

ಯಲ್ಲಾಪುರ: ಜನಸಂಖ್ಯೆಯನ್ನು ಮಾನವ ಸಂಪನ್ಮೂಲವಾಗಿ ರೂಪಿಸಿದಾಗ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
ಅವರು ಬುಧವಾರ ಪಟ್ಟಣದ ಅಡಕೆ ಭವನದಲ್ಲಿ ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನಸಂಖ್ಯೆ ನಿಯಂತ್ರಣದ ಕುರಿತು ಸರಿಯಾದ ಅರಿವು ಮೂಡಿಸುವ ಕಾರ್ಯ ಆಗಬೇಕೆಂದರು.
ಬಿಇಒ ಎನ್ ಆರ್.ಹೆಗಡೆ, ತಾಲೂಕು ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ, ತಾಪಂ ಇಒ ಅಧಿಕಾರಿ ಜಗದೀಶ ಕಮ್ಮಾರ, ಡಾ.ಸೌಮ್ಯ ಕೆ.ವಿ, ಡಾ. ರಮೇಶರಾವ್,ಗ್ರೀನ್ ಕೇರ್ ಕಾರ್ಯದರ್ಶಿ ಜಿತೇಂದ್ರಕುಮಾರ ತೋನ್ಸೆ, ಆರೋಗ್ಯ ಶಿಕ್ಷಣಾಧಿಕಾರಿ ಎಸ್. ಟಿ. ಭಟ್ಟ ಇತರರಿದ್ದರು.