ಕುಸಿಯುವ ಭೀತಿಯಲ್ಲಿ ಗಾಂಧಿನಗರ ಮುಖ್ಯರಸ್ತೆಯ ಸೇತುವೆ : ಸಂಚಾರ ಸ್ಥಗಿತ

ದಾಂಡೇಲಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದಾಂಡೇಲಿಯ ಗಾಂಧಿನಗರದ ಮುಖ್ಯ ರಸ್ತೆಯ ಗಣಪತಿ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಸಿಗುವ ಸೇತುವೆಯೊಂದು ಬಿರುಕು ಬಿಟ್ಟು ಕುಸಿಯುವ ಭೀತಿಯಲ್ಲಿದೆ. ಬುಧವಾರ ಸಂಜೆ ಸೇತುವೆ ಹೆಚ್ಚಿನ ಪ್ರಮಾಣದಲ್ಲಿ ಬಿರುಕು ಬಿಟ್ಟಿದ್ದು, ಸೇತುವೆ ಯಾವುದೇ ಸಂದರ್ಭದಲ್ಲಿ ಕುಸಿಯುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಸ್ಥಳೀಯ ನಗರ ಸಭಾ ಸದಸ್ಯರಾದ ಬುದ್ಧಿವಂತಗೌಡ ಪಾಟೀಲ್ ಅವರ ನೇತೃತ್ವದಲ್ಲಿ ಇಂದು ಸಂಜೆ ರಸ್ತೆಗೆ ಅಡ್ಡಲಾಗಿ ಬ್ಯಾರಿಕೆಡ್ ಗಳನ್ನು ಅಳವಡಿಸಲು ಕ್ರಮವನ್ನು ಕೈಗೊಳ್ಳಲಾಗಿದೆ. ಈ ರಸ್ತೆಯಲ್ಲಿ ಸಾರ್ವಜನಿಕರು ಓಡಾಡದಂತೆ ಮುನ್ನೆಚ್ಚರಿಕೆಯನ್ನು ವಹಿಸಲಾಗಿದೆ.