ದಾಂಡೇಲಿ-ಮೌಳಂಗಿ ರಸ್ತೆಯಲ್ಲಿ ಧರೆಗುರುಳಿದ ಬೃಹತ್ ಗಾತ್ರದ ಮರ- ಸಂಚಾರ ಸ್ಥಗಿತ

ದಾಂಡೇಲಿ : ತಾಲ್ಲೂಕಿನ ನವಗ್ರಾಮ-ಮೌಳಂಗಿ ಮುಖ್ಯರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಧರೆಗುರುಳಿ ಸಂಚಾರ ಸ್ಥಗಿತಗೊಂಡ ಘಟನೆ ಇಂದು ಬುಧವಾರ ರಾತ್ರಿ 9.30 ಗಂಟೆಗೆ ನಡೆದಿದೆ.

ನಡುರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದ ಹಿನ್ನಲೆಯಲ್ಲಿ ಮೌಳಂಗಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೂಡಲೆ ಎಚ್ಚೆತ್ತ ಸ್ಥಳೀಯರಾದ ಮೌಳಂಗಿ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರಾದ ವಿನೋದ್ ಮೈನಾಗೋಳ, ಮೌಳಂಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಧರ್ಮರಾಜ್ ಥೋರವತ್, ಸ್ಥಳೀಯರಾದ ವೀರೇಶ್, ಅಂಬೇವಾಡಿ ಗ್ರಾಮ ಪಂಚಾಯ್ತಿಯ ಅರ್ಜುನ್, ಹಾಗೂ ಸ್ಥಳೀಯ ಸಾರ್ವಜನಿಕರು ಸೇರಿ ಮರ ತೆರವು ಕಾರ್ಯಾಚರಣೆಗೆ ಮುಂದಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳದಲ್ಲಿದ್ದು ತೆರವು ಕಾರ್ಯಾಚರಣೆಯ ನೇತೃತ್ವವನ್ನು ವಹಿಸಿಕೊಂಡಿದ್ದಾರೆ.