ಮಣಿಪುರ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಹಳಿಯಾಳದಲ್ಲಿ ಪ್ರತಿಭಟನಾ ಮೆರವಣಿಗೆ

ಹಳಿಯಾಳ: ಮಣಿಪುರ ರಾಜ್ಯದಲ್ಲಿ ಮೂವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ್ದನ್ನು ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ತೀವ್ರವಾಗಿ ಖಂಡಿಸಿ, ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಲು ಒತ್ತಾಯಿಸಿ ಹಳಿಯಾಳ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ, ಆನಂತರ ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಲೋಕೇಶ್ ಅವರ ಮೂಲಕ ನೀಡಲಾಯ್ತು.

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರುಗಳಾದ ಜಯಶ್ರೀ ಹಿರೇಕರ್, ಟಿ.ಎಸ್ ಗುರುಬಣ್ಣನವರ್, ಶೋಭಾ ಕುರಟ್ಟಿ, ಬ್ರೆಜಿಟಾ ಹಾಗೂ ಸಂಘಟನೆಯ ಮುಖಂಡರು ಮತ್ತು ಸದಸ್ಯರು ಉಪಸ್ಥಿತರಿದ್ದರು.