ತೀರ್ಥಹಳ್ಳಿಯಲ್ಲಿ ಜಿಂಕೆ ಶಿಕಾರಿ ಮಾಡಿದ ಇಬ್ಬರ ಬಂಧನ; ಆರೋಪಿಗಳಿಂದ 2 ಬೈಕ್​ ವಶ

ಶಿವಮೊಗ್ಗ, ಜು.27: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ವಲಯದ ಕುಳ್ಳುಂಡೆ ಗ್ರಾಮದಲ್ಲಿ ಜಿಂಕೆ ಶಿಕಾರಿ ಮಾಡಿದ್ದ ಐವರಲ್ಲಿ ಇಬ್ಬರನ್ನು ಬಂಧಿಸಲಾಗಿದೆ. 20 ವರ್ಷದ ರಜತ್, ವಿನಯ್ ಬಂಧಿತ ಆರೋಪಿಗಳು. ಇನ್ನುಳಿದ ಮೂವರು ಪರಾರಿಯಾಗಿದ್ದು, ಹುಡುಕಾಟ ಆರಂಭಿಸಿದ್ದಾರೆ. ಗ್ರಾಮದ ಶೆಡ್​ವೊಂದರಲ್ಲಿ ಮಾಂಸಕ್ಕಾಗಿ ಜಿಂಕೆ ಕಡಿಯುತ್ತಿದ್ದಾಗ ಮಂಡಗದ್ದೆ ವಲಯ ಅರಣ್ಯಾಧಿಕಾರಿ ನೇತೃತ್ವದಲ್ಲಿ ದಾಳಿ ಮಾಡಿದ್ದರು. ಬಂಧಿತರಿಂದ ಜಿಂಕೆ ಮಾಂಸ ಹಾಗೂ ಎರಡು ಬೈಕ್ ವಶಕ್ಕೆ ಪಡೆಯಲಾಗಿದೆ.