ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯಿಂದ ದಿ: ಅಜಿತ್ ನಾಯಕ ಅವರ ಪುಣ್ಯಸ್ಮರಣೆ

ದಾಂಡೇಲಿ : ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ದಾಂಡೇಲಿ ಬಚಾವೋ ಸಮಿತಿಯ ಅಧ್ಯಕ್ಷರು, ಹಿರಿಯ ನ್ಯಾಯವಾದಿಗಳು ಮತ್ತು ನಗರ ಸಭೆಯ ಮಾಜಿ ಅಧ್ಯಕ್ಷರಾಗಿದ್ದ ದಿ: ಅಜಿತ್ ನಾಯಕರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನಗರದ ಬಸ್ ನಿಲ್ದಾಣದ ಹತ್ತಿರ ಹಮ್ಮಿಕೊಳ್ಳಲಾಯ್ತು.

ಕಾರ್ಯಕ್ರಮದ ಆರಂಭದಲ್ಲಿ ಅಜಿತ್ ನಾಯಕರ ಭಾವಚಿತ್ರಕ್ಕೆ ಪುಷ್ಪಗೌರವವನ್ನು ಸಲ್ಲಿಸಲಾಯ್ತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್, ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಗಡೆಪ್ಪನವರ್, ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಪಾಟೀಲ್ ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಮೊದಲಾದವರು ಉಪಸ್ಥಿತರಿದ್ದು, ಅಜಿತ್ ನಾಯಕ ಅವರ ನಾಯಕತ್ವ, ಹೋರಾಟ ಮತ್ತು ಸಮಾಜಮುಖಿ ಕಾರ್ಯವನ್ನು ಸ್ಮರಿಸಿಕೊಂಡರು.