ಕರ್ನಾಟಕ ಬಿಜೆಪಿ ಅಧ್ಯಕ್ಷ ಹುದ್ದೆ ಬಗ್ಗೆ ಸಿಟಿ ರವಿ ಅಚ್ಚರಿ ಹೇಳಿಕೆ

ಬೆಂಗಳೂರು, (ಜುಲೈ 30): ನಳಿನ್ ಕುಮಾರ್ ಕಟೀಲ್ ಅವರ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಕರ್ನಾಟಕ bjp ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ. CT Ravi ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲ ಹೈಕಮಾಂಡ್​ ಚಿಂತನೆ ನಡೆಸಿದೆ. ಸಿಟಿ ರವಿಯವರೇ ರಾಜ್ಯ ಬಿಜೆಪಿ ಅಧ್ಯಕ್ಷ ಎಂದು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಸಹ ಸುಳಿವು ನೀಡಿದ್ದರು. ಇದಲ್ಲದೆ ಇದಕ್ಕೆ ಪುಷ್ಟಿ ನೀಡುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಹೈಕಮಾಂಡ್ ಕೊಕ್ ಕೊಟ್ಟಿದೆ. ಹೀಗಾಗಿ ಸಿಟಿ ರವಿಗೆ ರಾಜ್ಯಾಧ್ಯಕ್ಷ ಹುದ್ದೆ ಬಹುತೇಕ ಫಿಕ್ಸ್ ಎನ್ನಲಾಗಿದೆ. ಆದ್ರೆ, ಇದರ ಮಧ್ಯೆ ಸ್ವತಃ ಸಿಟಿ ರವಿ ಈ ಬಗ್ಗೆ ಪ್ರತಿಕ್ರಿಯಿಸಿ ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ, ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ರಾಜ್ಯಾಧ್ಯಕ್ಷ ಎನ್ನುವುದು ಜವಾಬ್ದಾರಿಯುತವಾದ ಸ್ಥಾನ. ಹುದ್ದೆಯನ್ನು ಕೇಳಿ ಪಡೆಯುವಂತದ್ದಲ್ಲ, ಈ ಬಗ್ಗೆ ಪಕ್ಷ ನಿರ್ಧರಿಸುತ್ತೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಇಂದು(ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ, ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ರಾಜ್ಯಾಧ್ಯಕ್ಷ ಎನ್ನುವುದು ಜವಾಬ್ದಾರಿಯುತವಾದ ಸ್ಥಾನ. ಹುದ್ದೆಯನ್ನು ಕೇಳಿ ಪಡೆಯುವಂತದ್ದಲ್ಲ, ಈ ಬಗ್ಗೆ ಪಕ್ಷ ನಿರ್ಧರಿಸುತ್ತೆ ಎಂದು ಸ್ಪಷ್ಟಪಡಿಸಿದರು.