ಬೊಲೆರೋ ವಾಹನ ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್.!

ಮುಂಡಗೋಡ: ಅಡ್ಡಬಂದ ಬೊಲೆರೊ ವಾಹನನ್ನು ತಪ್ಪಿಸಲು ಹೋಗಿ ಕೆ ಎಸ್ ಆರ್ ಟಿ ಸಿ ಬಸ್ ಅಪಘಾತಕ್ಕೀಡಾದ ಘಟನೆ ಕಾತೂರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಪುರ ಗ್ರಾಮದಲ್ಲಿ ನಡೆದಿದೆ.

ಶಿರಸಿ ಕಡೆಯಿಂದ ಬಸ್ ತೆರಳುತ್ತಿದ್ದ ವೇಳೆ ಎದುರಿನಿಂದ ಬೊಲೇರೋ ವಾಹನ ಅಡ್ಡ ಬಂದಿದೆ. ಈ ವೇಳೆ ಬಸ್ ಚಾಲಕ ಬೊಲೇರೋ ವಾಹನ ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿ ಮರದ ಟೊಂಗೆಗೆ ಡಿಕ್ಕಿ ಹೊಡೆದು ಚರಂಡಿಗೆ ಹೋಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.