ಬೈಕ್ ಸ್ಕಿಡ್ಡಾಗಿ ಬಿದ್ದು ಆಸ್ಪತ್ರೆ ಸೇರಿದ ಸವಾರ

ಮುಂಡಗೋಡ: ಪಟ್ಟಣದ ಎಪಿಎಂಸಿ ಹತ್ತಿರ ಬೈಕ್ ಸ್ಕಿಡ್ಡಾಗಿ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯವಾದ ಘಟನೆ ಶನಿವಾರ ನಡೆದಿದೆ.

ಬಾಚಣಕಿ ಗ್ರಾಮದ ಯುವಕ ಮಾಲತೇಶ ಕಮ್ಮಾರ (22) ಗಾಯಗೊಂಡ ಯುವಕ. ಬಾಚಣಕಿ ಗ್ರಾಮದಿಂದ ಮುಂಡಗೋಡ ಪಟ್ಟಣಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ಗೆ ಕರೆದೊಯ್ಯುಲಾಗಿದೆ.