ಇಂದು ದಾಂಡೇಲಿಯಲ್ಲಿ “ಕುಶ ಲವ ಕೀಚಕ ವಧೆ” ಯಕ್ಷಗಾನ ಪ್ರದರ್ಶನ.

ದಾಂಡೇಲಿ : ನಗರದ ಕಲಾಶ್ರೀ ಸಂಸ್ಥೆ ಇವರ ಆಶ್ರಯದಡಿ ಕುಂದಾಪುರದ ಹಾಲಾಡಿಯ ಶ್ರೀ.ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿ ಹಾಗೂ ಅತಿಥಿ ಕಲಾವಿದರ ಮೇಳೈಸುವಿಕೆಯಲ್ಲಿ ಇಂದು ರಾತ್ರಿ 9 ಗಂಟೆಯಿಂದ ನಗರದ ಕುಳಗಿ ರಸ್ತೆಯಲ್ಲಿರುವ ವಿದ್ಯಾಧಿರಾಜ ಸಭಾಭವನದಲ್ಲಿ “ಕುಶ ಲವ ಕೀಚಕ ವಧೆ” ಎಂಬ ಎಂಬ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕಲಾಶ್ರೀ ಸಂಸ್ಥೆಯು ಪ್ರಕಟನೆಯಲ್ಲಿ ತಿಳಿಸಿದೆ.

ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ನಡೆಯಲಿರುವ ಈ ಯಕ್ಷಗಾನ ಪ್ರದರ್ಶನಕ್ಕೆ ಉಚಿತ ಪ್ರವೇಶವಿದ್ದು, ಈ ಯಕ್ಷಗಾನ ಕಾರ್ಯಕ್ರಮದಲ್ಲಿ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕಲಾಶ್ರೀ ಸಂಸ್ಥೆ ವಿನಂತಿಸಿದೆ.