ಚಾಲಕನ ನಿಯಂತ್ರಣ ತಪ್ಪಿ ksrtc ಬಸ್ ರಸ್ತೆ ಪಕ್ಕದ ಗದ್ದೆಗೆ ಬಿದ್ದು ಚಾಲಕ ಸೇರಿ 11 ಜನ ಪ್ರಯಾಣಿಕರಿಗೆ ಗಾಯ.

ಶಿರಸಿ : ಚಾಲಕನ ನಿಯಂತ್ರಣ ತಪ್ಪಿ ksrtc‌ ಬಸ್ ರಸ್ತೆ ಪಕ್ಕದ ಗದ್ದೆಗೆ ಬಿದ್ದು ಚಾಲಕ ಸೇರಿ 11 ಜನ ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ
ಕೆ ಎ 19,ಎಫ್ 3419 ನಂಬರನ ಬಸ್ ಶಿರಸಿ ಕುಮಟಾ ಹೆದ್ದಾರಿಯಲ್ಲಿ ಕುಮಟಾ ಕಡೆಯಿಂದ ಸಿರ್ಸಿ ಕಡೆಗೆ ಹೋಗುತ್ತಿರುವಾಗ ಶಿರಸಿ ತಾಲೂಕಿನ ಹನುಮಂತಿ ಸಮೀಪದ ಹಾರುಗಾರ್ ಬಳಿ ಘಟನೆ ಸಂಭವಿಸಿದೆ
ಚಾಲಕ ಸೇರಿ ಬಸ್‌ನಲ್ಲಿ 11 ಪ್ರಯಾಣಿಕರಿಗೆ ಗಾಯ ವಾಗಿದ್ದು ಗಾಯಾಳುಗಳನ್ನು ಶಿರಸಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.