ರಾಹುಲ್ ಗಾಂಧಿಯವರ ಸಂಸದ ಸ್ಥಾನ ಅನರ್ಹ ತೀರ್ಪಿಗೆ ಸರ್ವೋಚ್ಚ ನ್ಯಾಯಾಲಯ ತಡೆ : ದೇಶಪಾಂಡೆ ಹರ್ಷ

ಹಳಿಯಾಳ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂಸದ ಸ್ಥಾನವನ್ನು ಗುಜಾರಾತ್ ಉಚ್ಚ ನ್ಯಾಯಾಲಯವು ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ಮೇಲ್ಮನವಿಗೆ ಸರ್ವೋಚ್ಚ ನ್ಯಾಯಾಲಯವು ಸಂಸದ ಸ್ಥಾನದ ಅನರ್ಹ ತೀರ್ಪಿಗೆೆ ತಡೆಯಾಜ್ಞೆ ನೀಡಿರುವುದನ್ನು ಹಳಿಯಾಳ ಪಟ್ಟಣದಲ್ಲಿ ಶಾಸಕ ಆರ್.ವಿ.ದೇಶಪಾಂಡೆಯವರು ಸ್ವಾಗತಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ.