ಬೀದಿ ನಾಯಿಗಳಿಂದ ರಕ್ಷಿಸಿಕೊಳ್ಳಲು ಹೋಗಿ ಚರಂಡಿಯಲ್ಲಿ ಸಿಲುಕಿ ಸಾವನ್ನಪ್ಪಿದ ಜಿಂಕೆ.!

ಮುಂಡಗೋಡ: ಆಹಾರ ಅರಿಸಿ ಬಂದಿದ್ದ ಜಿಂಕೆಯೊಂದು ಪಟ್ಟಣದ ಹೊರವಲಯದ ಕಸ ವಿಲೇವಾರಿ ಘಟಕದ ಹತ್ತಿರ ಚರಂಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದ ಘಟನೆ ನಡೆದಿದೆ.

ಆಹಾರ ಅರಿಸಿ ಬಂದಿದ್ದ ಜಿಂಕೆಯನ್ನು ಬೀದಿ ನಾಯಿಗಳು ಬೆನ್ನಟ್ಟಿದ್ದರಿಂದ ಜಿಂಕೆ ಭಯಗೊಂಡು ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡಿದೆ. ಆಗ ಕಸ ವಿಲೇವಾರಿ ಘಟಕದ ಬಳಿ ಇರುವ ಚರಂಡಿಯಲ್ಲಿ ಸಿಲುಕಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಇನ್ನು ಸಾವನ್ನಪ್ಪಿದ ಜಿಂಕೆಯನ್ನು ಕಸವಿಲೇವಾರಿ ಘಟಕದ ಸಿಬ್ಬಂದಿಗಳು ನೋಡಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಸಿಬ್ಬಂದಿಗಳು ಜಿಂಕೆಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ಮಾಡಿದ್ದಾರೆ.