ದಾಂಡೇಲಿಯ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ

ದಾಂಡೇಲಿ : ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಕಾರ್ಯಕ್ರಮವನ್ನು ಇಂದು ಶನಿವಾರ ಹಮ್ಮಿಕೊಳ್ಳಲಾಯಿತು.

ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅಖಿಲ್ ಕಿತ್ತೂರು ಅವರು ಮಾತನಾಡಿ ತಾಯಿಯ ಎದೆಹಾಲು ಮಗುವಿಗೆ ಅಮೃತ ಸಮಾನ. ಸ್ತನ್ಯಪಾನ ಮಗುವಿನ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮಗುವಿಗೆ ಅಗತ್ಯವಾದ ಎಲ್ಲ ಪೌಷ್ಟಿ ಕಾಂಶಗಳು ತಾಯಿಯ ಹಾಲಿನಲ್ಲಿವೆ ಎಂದು ಹೇಳಿ ಎದೆ ಹಾಲಿನ ಮಹತ್ವವನ್ನು ವಿವರಿಸಿದರು.

ವೇದಿಕೆಯಲ್ಲಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ಡಾ.ಎಸ್.ಟಿ.ಬಂಟ್, ಡಾ.ಮಂಜುನಾಥ್ ಉಪಸ್ಥಿತರಿದ್ದರು‌.