ಮಂಗಳೂರಿನಲ್ಲಿ ಅಪಾರ್ಟ್​ಮೆಂಟ್​ನಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

ದಕ್ಷಿಣ ಕನ್ನಡ,  ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಬಿಲ್ಡರ್ಮಾ ಡಿಕೊಂಡ ಘಟನೆ ಮಂಗಳೂರಿನ ಬೆಂದೂರುವೆಲ್​ನಲ್ಲಿ ನಡೆದಿದೆ. ಮೋಹನ್​ ಅಮೀನ್ ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಇತ ಮಂಗಳೂರಿನಲ್ಲಿ ವಿವಿಧ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿದ್ದ. ಇದೀಗ ಅಟ್ಲಾಂಟಿಕ್ ಅಪಾರ್ಟ್ಮೆಂಟ್​ನಿಂದ ಹಾರಿ ಸಾವಿಗೆ ಶರಣಾಗಿದ್ದಾನೆ. ಈ ಕುರಿತು ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಹಾಸನ: ನಗರದ ವಾರ್ಡ್‌ ನಂಬರ್‌ 35 ಕೆ.ಹೊಸಕೊಪ್ಪಲಿನಲ್ಲಿ ಕಾರು ಕದ್ದು, ಬೈಕ್ ಬಿಟ್ಟು ಹೋದ ಘಟನೆ ನಡೆದಿದೆ. ಅಭಿಷೇಕ್‌ ಎಂಬುವವರಿಗೆ ಸೇರಿದ ಮಾರುತಿ 800 ಕಾರನ್ನು ಜುಲೈ 30 ರಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ಬಂದು ಕಾರಿನ ಡೋರ್ ತೆಗೆದು ಸ್ವಲ್ಪ ದೂರು ಕಾರನ್ನು ತಳ್ಳಿಕೊಂಡು ಹೋಗಿ, ಆ ನಂತರ ಕಾರು ಸ್ಟಾರ್ಟ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಕಾರು ಕದಿಯಲು ಬೈಕ್‌ನಲ್ಲಿ ಬಂದಿದ್ದ ಚೋರರು, ಬೈಕ್‌ನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದು, ಕಾರು ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಈ ಕುರಿತು ಕೆ.ಆರ್.ಪುರಂ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ.