ನಾಳೆ ದಾಂಡೇಲಿಗೆ ಪಂ: ಎಂ. ವೆಂಕಟೇಶಕುಮಾರ್ ಹಾಗೂ ವೃಕ್ಷಮಾತೆ ತುಳಸಿ ಗೌಡ ಆಗಮನ

ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಳೆ ವಾರ್ಷಿಕ ಸ್ನೇಹ ಸಮ್ಮೇಳನ, ಬಹುಮಾನ ವಿತರಣೆ ಹಾಗೂ ಸಾಂಸ್ಕೃತಿಕ ಒಕ್ಕೂಟ, ಕ್ರೀಡಾ ವಿಭಾಗ, ಎನ್.ಸಿ.ಸಿ, ಎನ್.ಎಸ್.ಎಸ್, ಯುವ ರೆಡ್ ಕ್ರಾಸ್ ಮತ್ತು ಸ್ಕೌಟ್ಸ್& ಗೈಡ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಾಡಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಪಂ. ಎಂ. ವೆಂಕಟೇಶಕುಮಾರ್ ಹಾಗೂ ವೃಕ್ಷಮಾತೆ ತುಳಸಿ ಗೌಡ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉಸ್ತಾದ ಕೆ. ಎಲ್. ಜಮಾದಾರ  ಹಾಗೂ ಶಶಿಧರ ತೋಡಕರ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿರುವ ಆರ್. ವಿ. ದೇಶಪಾಂಡೆಯವರು ವಹಿಸಲಿದ್ದಾರೆ. ವಿಶೇಷ ಅಹ್ವಾನಿತರಾಗಿ ತಾಲ್ಲೂಕಿನ ಪತ್ರಕರ್ತರು ಹಾಗೂ ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಎಂ. ಡಿ. ಒಕ್ಕುಂದ ಅವರು ಇಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.