ವಿದ್ಯುತ್ ಪರಿವರ್ತಕದಲ್ಲಿ ಕಾಣಿಸಿಕೊಂಡ ಬೆಂಕಿ : ಅಪಾಯವನ್ನು ತಪ್ಪಿಸಿದ ಹೆಸ್ಕಾಂ ಸಿಬ್ಬಂದಿಗಳು

ದಾಂಡೇಲಿ : ನಗರದ ಜೆ.ಎನ್.ರಸ್ತೆಯಲ್ಲಿ ವಿಘ್ನೇಶ್ವರ ಕಟ್ಟಡದ ಹತ್ತಿರ ವಿದ್ಯುತ್ ಪರಿವರ್ತಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲ ಹೊತ್ತು ಆತಂಕ ಸೃಷ್ಟಿಯಾದ ಘಟನೆ ಬುಧವಾರ ಸಂಜೆ ನಡೆದಿದೆ.

ವಿದ್ಯುತ್ ಪರಿವರ್ತಕದಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿಯನ್ನು ಪಡೆದ ಹೆಸ್ಕಾಂ ಸಿಬ್ಬಂದಿಗಳು ತಕ್ಷಣವೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಸ್ಕಾಂ ಸಿಬ್ಬಂದಿಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಪರಿಣಾಮವಾಗಿ ಮುಂದಾಗಬಹುದಾದ ಅಪಾಯ ತಪ್ಪಿದಂತಾಗಿದೆ