ವೆಲ್ಡಿಂಗ್ ಮತ್ತು ಫ್ಯಾಬ್ರಿಕೇಶನ್ ತರಬೇತಿಯ ಸಮಾರೋಪ ಸಮಾರಂಭ

ಹಳಿಯಾಳ : ಪಟ್ಟಣದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಲ್ಲಿ ವೆಲ್ಡಿಂಗ್ ಮತ್ತು ಫ್ಯಾಬ್ರಿಕೇಶನ್ ತರಬೇತಿಯ ಸಮಾರೋಪ ಸಮಾರಂಭ ಕಾರ್ಯಕ್ರಮವು ಇಂದು ಜರುಗಿತು.

ಮುಖ್ಯ ಅಥಿತಿಗಳಾಗಿ ಪಟ್ಟಣದ ಕೆ.ಎಲ್.ಎಸ್ ವಿ.ಡಿ.ಐ.ಟಿ ಕಾಲೇಜಿನ ಉಪನ್ಯಾಸಕರಾದ ಕೆ.ಎಸ್. ಪೂಜಾರ ಅವರು ಭಾಗವಹಿಸಿ ಮಾತನಾಡುತ್ತಾ, ವೆಲ್ಡಿಂಗ್ ಮತ್ತು ಫ್ಯಾಬ್ರಿಕೇಶನ್ ತರಬೇತಿಯಲ್ಲಿ ಪಡೆದಿರುವ ಜ್ಞಾನವನ್ನು ನಿರಂತರವಾಗಿ ಪ್ರಾಯೋಗಿಕವಾಗಿ ಬಳಸಿಕೊಳ್ಳಿ. ಈ ಕ್ಷೇತ್ರದಲ್ಲಿ ಬಹಳಷ್ಟು ಅವಕಾಶಗಳಿವೆ ಅದರ ಉಪಯೋಗವನ್ನು ಪಡೆದುಕೊಂದು ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕೆಂದು ಕರೆ ನೀಡಿದರು.

ದೇಶಪಾಂಡೆ ಐಟಿಐ ಕಾಲೇಜಿನ ಉಪನ್ಯಾಸಕರಾದ ಕಾಶಿನಾಥ ಭಂಡಾರಿ ಅವರು ಮಾತನಾಡಿ ವೆಲ್ಡಿಂಗ್ ಮತ್ತು ಫ್ಯಾಬ್ರಿಕೇಶನ್ ಕ್ಷೇತ್ರದಲ್ಲಿಯೇ ಮುಂದುವರಿಯಿರಿ. ಭವಿಷ್ಯದಲ್ಲಿ ಉಜ್ವಲ ಅವಕಾಶಗಳಿವೆ ಎಂದರು.

ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಯೋಜನಾ ಸಂಯೋಜಕರಾದ ವಿನಾಯಕ ಚೌವ್ಹಾಣ್ ಅವರು ಈ ತರಬೇತಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ದಾರಿದೀಪವಾಗಲಿ ಎಂದರು.

ಸಂಸ್ಥೆಯ ತರಬೇತಿ ಸಂಯೋಜಕರಾದ ಕೊಂಡು ಕೊಕರೆ ಸ್ವಾಗತಿಸಿದ