ಮನಿ ಡಬ್ಲಿಂಗ್ ಪ್ರಕರಣದಲ್ಲಿ ಬಾಗೇಪಲ್ಲಿ ಪೊಲೀಸರ ಶಾಮೀಲು: ಸಾಲು ಸಾಲು ಮೂವರು ಪೊಲೀಸರು ಅಮಾನತು

ಚಿಕ್ಕಬಳ್ಳಾಪುರ:  ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲಾಗಿರುವ ಆರೋಪದಲ್ಲಿ ಇಬ್ಬರು ಕಾನ್​ಸ್ಟೇಬಲ್​​ಗಳು ಮತ್ತು ಒಬ್ಬ ಪೊಲೀಸ್​​ ಇನ್ಸ್​​ಪೆಕ್ಟರ್ ಅನ್ನು ಸೇವೆಯಿಂದ ಅಮಾನತು ಮಾಡಿ, ಮನೆಗೆ ಕಳಿಸಲಾಗಿದೆ. ಬಾಗೇಪಲ್ಲಿ ಠಾಣೆಯ ಕಾನ್​ಸ್ಟೇಬಲ್​​ ನರಸಿಂಹಮೂರ್ತಿ, ಕಾನ್​ಸ್ಟೇಬಲ್​​ ಅಶೋಕ್ ಅವರನ್ನು ಅಮಾನತು ಮಾಡಿ ಚಿಕ್ಕಬಳ್ಳಾಪುರ ಪೊಲೀಸ್ವ ರಿಷ್ಠಾಧಿಕಾರಿ ಡಿ.ಎಲ್. ನಾಗೇಶ ಹೊರಡಿಸಿದ್ದಾರೆ.ಇನ್ನು ಪೊಲೀಸ್ ಇನ್ಸ್​​ಪೆಕ್ಟರ್ ರವಿಕುಮಾರ್ ಅವರನ್ನು ಅಮಾನತು ಮಾಡಿ ಕೇಂದ್ರ ವಲಯ ಐ.ಜಿ.ಪಿ. ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ. ರವಿಕುಮಾರ್ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಚೇಳೂರು ಪೊಲೀಸ್ ಠಾಣೆಗಳ ಇನ್ಸ್​​ಪೆಕ್ಟರ್ ಆಗಿದ್ದರು. ಪ್ರಕರಣದಲ್ಲಿ ಪೊಲೀಸರ ಶಾಮೀಲು ಹಾಗೂ ಕರ್ತವ್ಯ ಲೋಪದ ಬಗ್ಗೆ ಸಾಕ್ಷ್ಯ ಸಹಿತ ವರದಿಗಳನ್ನು ಪ್ರಕಟಿಸಿತ್ತು.ಬಾಗೇಪಲ್ಲಿ ಠಾಣೆ ವ್ಯಾಪ್ತಿಯಲ್ಲಿ ಪಿಂಕ್ ಟು ಗ್ರೀನ್ ನೋಟ್ ಜಾಲದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ ಬಿಡುಗಡೆ ಮಾಡಿದ್ದ ಬಾಗೇಪಲ್ಲಿ ಪೊಲೀಸರ ವಿರುದ್ಧ ಲಂಚಾವತಾರ ಕೇಳಿಬಂದಿತ್ತು. 5 ದಿನ ಕಳೆದರೂ ಪೊಲೀಸರು ಪ್ರಕರಣ ದಾಖಲಿಸದೇ ಮುಚ್ಚಿ ಹಾಕಲು ಯತ್ನಿಸಿದ್ದರು.