ಕರ್ನಾಟಕದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

ಬೆಂಗಳೂರು, ಆಗಸ್ಟ್ 13:  ಸ್ವಾತಂತ್ರ್ಯ ದಿನಾಚರಣೆ  ಅಂಗವಾಗಿ ಕೊಡಮಾಡಲ್ಪಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ಸೇರಿದಂತೆ ಕರ್ನಾಟಕ ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಐಪಿಎಸ್‌ ಅಧಿಕಾರಿಗಳಾದ ಸಿಮಂತ್ ಕುಮಾರ್ ಸಿಂಗ್, ಎಸ್‌. ಮುರುಗನ್, ಸಂದೀಪ್ ಪಾಟೀಲ್‌, ಸಿಐಡಿ ಎಸ್​ಪಿ ರಾಘವೇಂದ್ರ ಕೆ.ಹೆಗ್ಡೆ, ಬಿ. ಎಸ್. ಮೋಹನ್ ಕುಮಾರ್, ಶಿವಶಂಕರ್, ಎಂ.ಬಿ.ಎನ್. ಶ್ರೀನಿವಾಸ್, ಅನಿಲ್ ಕುಮಾರ್. ಪಿ. ಸೇರಿದಂತೆ ಒಟ್ಟು 20 ಮಂದಿ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.