ಮುರುಘರಾಜೇಂದ್ರ ಅಂಧ ಮಕ್ಕಳ ಶಾಲೆಯಲ್ಲಿ ವನಮಹೋತ್ಸವ

ಸಿದ್ದಾಪುರ: ಲಯನ್ಸ್ ಕ್ಲಬ್ ವತಿಯಿಂದ ಪಟ್ಟಣದ ಹಾಳದಕಟ್ಟಾದಲ್ಲಿರುವ ಜಗದ್ಗುರು ಮುರುಘರಾಜೇಂದ್ರ ಅಂಧ ಮಕ್ಕಳ ಶಾಲೆಯಲ್ಲಿ ವನಮೋಹೊತ್ಸವ ಆಚರಿಸಲಾಯಿತು.

ಲಯನ್ಸ್ ಅಂತರಾಷ್ಟ್ರೀಯ ನಿರ್ದೇಶಕ ಹೈದರಾಬಾದಿನ ಸುನಿಲ್ ಕುಮಾರ್ ಮತ್ತು ಅವರ ಪತ್ನಿ ಕವಿತಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ವೇಳೆ ರವಿ ಹೆಗಡೆ ಹೂವಿನಮನೆ, ಸಿದ್ದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಆರ್.ಎಂ.ಪಾಟೀಲ್, ಕಾರ್ಯದರ್ಶಿ ಕುಮಾರ್ ಗೌಡರ, ಜಿ.ಜಿ.ಹೆಗಡೆ ಬಾಳಗೋಡ, ಮತ್ತಿತರರು ಉಪಸ್ಥಿತರಿದ್ದರು.