ದಾಂಡೇಲಿ: ದ್ವಿಚಕ್ರ ವಾಹನ ಮತ್ತು ಕಾರು ಡಿಕ್ಕಿ : ಪವಾಡ ಸದೃಶ್ಯವಾಗಿ ಪಾರಾದ ದ್ವಿಚಕ್ರ ವಾಹನ ಸವಾರ

ದಾಂಡೇಲಿ : ನಗರದ ಸೋಮಾನಿ ವೃತ್ತದ ಹತ್ತಿರ ಕಾರು ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿ, ದ್ವಿಚಕ್ರ ವಾಹನ ಸವಾರ ಪವಾಡ ಸದೃಶ್ಯವಾಗಿ ಪಾರಾದ ಘಟನೆ ಬುಧವಾರ ನಡೆದಿದೆ.

ಜೆ.ಎನ್.ರಸ್ತೆಯಲ್ಲಿ ಬರುತ್ತಿದ್ದ ಕಾರು ಮತ್ತು ನಾಡ ಕಚೇರಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಸೋಮಾನಿ ವೃತ್ತದ ಹತ್ತಿರ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರ ಒಮ್ಮೇಲೆ ಪಲ್ಟಿಯಾಗಿ ಬಿದ್ದು, ಪವಾಡ ಸದೃಶ್ಯವಾಗಿ ಪಾರಾಗಿದ್ದಾನೆ. ಇನ್ನೂ ಕಾರಿನ ಮುಂಭಾಗ ಜಕಂಗೊಂಡಿದೆ. ದ್ವಿಚಕ್ರ ವಾಹನಕ್ಕೂ ಸಣ್ಣ ಪುಟ್ಟ ಹಾನಿಯಾಗಿದೆ.