ಸಿದ್ದಾಪುರ : ಸಮೂಹ ಸಂಪನ್ಮೂಲ ಕೇಂದ್ರ ಹಾರ್ಸಿಕಟ್ಟಾ ಇವುಗಳ ಸಹಯೋಗದಲ್ಲಿ ಹಾರ್ಸಿಕಟ್ಟಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಸಿದ್ದಾಪುರ : ತಾಲೂಕಿನ ವಾಜಗದ್ದೆ ಸಹಿಪ್ರಾ ಶಾಲೆಯ ಸಭಾಂಗಣದಲ್ಲಿ ಗ್ರಾಪಂ ಹಾರ್ಸಿಕಟ್ಟಾ, ಸಮೂಹ ಸಂಪನ್ಮೂಲ ಕೇಂದ್ರ ಹಾರ್ಸಿಕಟ್ಟಾ ಇವುಗಳ ಸಹಯೋಗದಲ್ಲಿ ಹಾರ್ಸಿಕಟ್ಟಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.
ವಾಜಗದ್ದೆ ದುರ್ಗಾವಿನಾಯಕ ದೇವಸ್ಥಾನದ ಮೊಕ್ತೆಸರ ಎಸ್.ಎಂ.ಹೆಗಡೆ ಪೆಟೇಸರ ಪ್ರತಿಭಾ ಕಾರಂಜಿ ಉದ್ಘಾಟಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪ್ರಸನ್ನ ಪಿ. ಹೆಗಡೆ ಅಧ್ಯಕ್ಷತೆವಹಿಸಿದ್ದರು. ಗ್ರಾಪಂ ಸದಸ್ಯ ಅನಂತ ಹೆಗಡೆ ಹೊಸಗದ್ದೆ, ದುರ್ಗಾವಿನಾಯಕ ಕೃಷಿಕ ಯುವಕ ಸಂಘದ ಅಧ್ಯಕ್ಷ ಗಣಪತಿ ಹೆಗಡೆ ಸುಳಗಾರ, ಸಿಆರ್‌ಪಿ ಶೋಭಾ ಡಿ.ಸಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ನಾಗರಾಜ ಮಡಿವಾಳ, ಕಾನಗೋಡ ಸಿಆರ್‌ಪಿ ಗಣೇಶ ಕೊಡಿಯಾ, ಹಾರ್ಸಿಕಟ್ಟಾ ಸಹಿಪ್ರಾ ಶಾಲೆಯ ಮುಖ್ಯಾಧ್ಯಾಪಕಿ ವಿಜಯಾ ನಾಯ್ಕ, ವಾಜಗದ್ದೆ ಸಹಿಪ್ರಾ ಶಾಲೆಯ ಮುಖ್ಯಾಧ್ಯಾಪಕ ಕೃಷ್ಣ ಎನ್.ಹೆಗಡೆ ಇತರರಿದ್ದರು.
ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಿಇಒ ಜಿ.ಐ. ನಾಯ್ಕ ಬಹುಮಾನ ವಿತರಿಸಿದರು. ಬಿಆರ್‌ಸಿ ಸಮನ್ವಯಾಧಿಕಾರಿ ಚೈತನ್ಯಕುಮಾರ, ಅಕ್ಷರದಾಸೋಹದ ಸಹಾಯಕ ನಿರ್ದೇಶಕ ಭೂಮೇಶ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ ಇತರರಿದ್ದರು. ಶಿಕ್ಷಕ ವಿನಾಯಕ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.