ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟ ಹಿನ್ನೆಯಲ್ಲಿ ಭಟ್ಕಳ ನಾಗರೀಕರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ.

ಭಟ್ಕಳ: ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟ ಹಿನ್ನೆಯಲ್ಲಿ ಭಟ್ಕಳ ನಾಗರೀಕರು ಇಲ್ಲಿನ ಶಂಸುದ್ದಿನ್ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಹಿಂದೂ ಮುಖಂಡ ಗೋವಿಂದ ನಾಯ್ಕ ಇಂದು ಭಾರತ ದೇಶ ಅತ್ಯಂತ ಹೆಮ್ಮೆ ಪಡುವ ದಿನವಾಗಿದ್ದು ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಿದೆ ಎಂದ ಅವರು ನಮ್ಮ ಭಾರತೀಯ ಇಸ್ರೋ ವಿಜ್ಞಾನಿಗಳ ಸತತ ಪ್ರಯತ್ನದಿಂದ ಇಂದು ಚಂದ್ರನ ಮೇಲೆವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗಿ ತಲುಪಿದ್ದು ಇಡೀ ಜಗತ್ತೇ ಭಾರತ ದೇಶವನ್ನು ಹಿಂತಿರುಗಿ ನೋಡುವಂತೆ ಮಾಡಿದೆ ಎಂದರು.

ಇದಕ್ಕೂ ಪೂರ್ವದಲ್ಲಿ ಭಟ್ಕಳ ಪುರಸಭೆ ಕಚೇರಿ ಮುಂಭಾದಲ್ಲಿ ಪುಸರಭೆ ಮುಖ್ಯಾಧಿಕಾರಿ ಮುಂದಾಳತ್ವದಲ್ಲಿ ಸಿಬ್ಬಂದಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು