ಶಿಕ್ಷಕರ ಖಾಲಿ ಹುದ್ದೆ ನೇಮಕ ಮತ್ತು ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಸಚಿವರಿಗೆ ಪತ್ರ – ಆರ್.ವಿ.ದೇಶಪಾಂಡೆ

ದಾಂಡೇಲಿ : ಜೋಯಿಡಾ ತಾಲ್ಲೂಕಿನಲ್ಲಿ 50 ಶಾಲೆಗಳು ಶಿಕ್ಷಕ ರಹಿತ ಶಾಲೆಗಳಿದ್ದು, ಮಕ್ಕಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಜೋಯಿಡಾ ತಾಲ್ಲೂಕಿನಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದರ ಜೊತೆಯಲ್ಲಿ ಅಗತ್ಯ ಬೇಕಾದ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವಂತೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರಿಗೆ ಪತ್ರ ಬರೆಯಲಾಗಿದೆ ಎಂದು ಹಾಗೂ ಈ ಬಗ್ಗೆ ಈಗಾಗಲೆ ಶಿಕ್ಷಣ ಆಯುಕ್ತರ ಗಮನಕ್ಕೂ ತರಲಾಗಿದೆ ಎಂದು ಇಂದು ಶಾಸಕರಾದ ಆರ್.ವಿ.ದೇಶಪಾಂಡೆಯವರು ಮಾಧ್ಯಮಕ್ಕೆ ತಿಳಿಸಿದ್ದಾರೆ.