ಜೋಯಿಡಾ ತಾಲ್ಲೂಕಿನ ಯರಮುಖದ ಶ್ರೀ.ಸೋಮೇಶ್ವರ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ

ಜೋಯಿಡಾ : ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಸ್ಥಳೀಯ ಮಾತೃ ಮಂಡಳಿಯ ಆಶ್ರಯದಡಿ ಇಂದು ಶುಕ್ರವಾರ ಸಂಜೆ ಶ್ರದ್ಧಾಭಕ್ತಿಯಿಂದ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ಜರುಗಿತು.

ವೇದಮೂರ್ತಿ ಪ್ರಸನ್ನ ಭಟ್ ಪೌರೋಹಿತ್ಯದಲ್ಲಿ ನಡೆದ ಈ ಪೂಜಾ ಕಾರ್ಯಕ್ರಮದಲ್ಲಿ ಮಾತೆಯರಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಗುಂದ ಸೀಮೆಯ ಮಾತೃ ಮಂಡಳಿ ಅಧ್ಯಕ್ಷೆ ಸೀತಾ ದಾನಗೇರಿ,ಉಪಾಧ್ಯಕ್ಷೆ ಗೀತಾ ಭಾಗ್ವಾತ ಮತ್ತು ಮಾತ್ರಮಂಡಳಿಯ ಸದಸ್ಯರು ಹಾಗೂ ಸ್ಥಳೀಯ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.