ಜೂಟ್ ಬ್ಯಾಗ್ ತಯಾರಿಕಾ ತರಬೇತಿಯ ಸಮಾರೋಪ

ದಾಂಡೇಲಿ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಹಸನ್ಮಾಳದಲ್ಲಿರುವ ವಿಸ್ತರಣಾ ಕೇಂದ್ರದಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ 13 ದಿನಗಳ ಉಚಿತ ಜೂಟ್ ಬ್ಯಾಗ್ ತಯಾರಿಕಾ ತರಬೇತಿಯ ಸಮಾರೋಪ ಸಮಾರಂಭವು ಇಂದು ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಗರ ಸಭೆಯ ಮಾಜಿ ಅಧ್ಯಕ್ಷೆ ಯಾಸ್ಮಿನ್ ಕಿತ್ತೂರು, ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣ ಗೌಡ ಅರಕೇರಿ, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ನಿರ್ದೇಶಕರಾದ ಪ್ರಶಾಂತ್ ಬಡ್ಡಿಯವರು ಭಾಗವಹಿಸಿ ತರಬೇತಿಯ ಲಾಭವನ್ನು ಪಡೆದು ಯಶಸ್ವಿ ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಸದೃಢರಾಗಬೇಕೆಂದು ಕರೆ ನೀಡಿದರು.

ಸಂಸ್ಥೆಯ ಯೋಜನಾಧಿಕಾರಿ ನಟರಾಜ ಅಂಗಡಿ ಸ್ವಾಗತಿಸಿದ ಕಾರ್ಯಕ್ರಮಕ್ಕೆ ಮೇಲ್ವಿಚಾರಕ ಅಂದಾನಪ್ಪ ಅಂಗಡಿ ವಂದಿಸಿದರು.