ನಾಪತ್ತೆಯಾದ ವ್ಯಕ್ತಿ ಸಾತ್ನಳ್ಳಿ ಕೆರೆಯಲ್ಲಿ ಶವವಾಗಿ ಪತ್ತೆ

ಹಳಿಯಾಳ : ದಿನಾಂಕ:24.08.2023 ರಂದು ನಾಪತ್ತೆಯಾಗಿದ್ದ ವೃದ್ಧರೋರ್ವರು ಹಳಿಯಾಳ ತಾಲ್ಲೂಕಿನ ಸಾತ್ನಳ್ಳಿ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿರುವುದರ ಬಗ್ಗೆ ಇಂದು ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.

ಹಳಿಯಾಳ ತಾಲ್ಲೂಕಿನ ಸಾತ್ನಳ್ಳಿ ಗ್ರಾಮದ ನಿವಾಸಿ 72 ವರ್ಷ ವಯಸ್ಸಿನ ಅಪ್ಪಾರಾವ್ ಪರಶುರಾಮ ಗೌಡ ಎಂಬವರೆ ಮೃತಪಟ್ಟ ದುರ್ದೈವಿ. ಇವರು ದಿನಾಂಕ:24.08.2023 ರಂದು ಸಾತ್ನಳ್ಳಿಯ ತಮ್ಮ ಮನೆಯಿಂದ ಹೊರ ಹೋದವರು ನಾಪತ್ತೆಯಾಗಿದ್ದರು. ಈ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ ನಾಪತ್ತೆಯಾಗಿದ್ದ ವ್ಯಕ್ತಿ ನಿನ್ನೆ ಸಾತ್ನಳ್ಳಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಇಲ್ಲವೇ ಅನಾರೋಗ್ಯದ ಸಮಸ್ಯೆಯಿಂದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರ ಸಾವಿಗೆ ಬೇರೆ ಯಾವುದೇ ಕಾರಣವಿಲ್ಲವೆಂದು ಮೃತರ ಪುತ್ರ ನಾರಾಯಣ ಅಪ್ಪಾರವಾವ್ ಗೌಡ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.