ರಾಮಕೃಷ್ಣ ಹೆಗಡೆ ಮತ್ತು ಮಹಿಳಾ ಸಬಲೀಕರಣ ಕಾರ್ಯಕ್ರಮ

ಸಿದ್ದಾಪುರ : ರಾಮಕೃಷ್ಣ ಹೆಗಡೆ ಜನ್ಮ ದಿನಾಚರಣೆಯ ಪ್ರಯುಕ್ತ ಪಟ್ಟಣ ವ್ಯಾಪ್ತಿಯ ಎಂ.ಜಿ.ಸಿ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಚಿಂತನೆ ರಾಮಕೃಷ್ಣ ಹೆಗಡೆ ಮತ್ತು ಮಹಿಳಾ ಸಬಲೀಕರಣ ಕಾರ್ಯಕ್ರಮ ನಡೆಯಿತು.
ಗಣ್ಯರು ರಾಮಕೃಷ್ಣ ಹೆಗಡೆ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಡಾ ಸುಮಂಗಲ ವೈದ್ಯ, ಕರಿಯಮ್ಮ ಬರ್ಮಾ ನಾಯ್ಕ್, ಲತಾ ಮಂಗಲದ ಕಾಮತ್, ಜಯಂತಿ ಶಾನ್ ಭಾಗ್ ರವರನ್ನು ಸನ್ಮಾನಿಸಲಾಯಿತು. ಪ್ರಮೋದ್ ಹೆಗಡೆ ದಿಕ್ಸೂಚಿ ಭಾಷಣ ಮಾಡಿದರು, ಶಶಿಭೂಷಣ್ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.