ಅಗಲಿದ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಾಬಾ ಮುಲ್ಲಾ ಅವರ ಮನೆಗೆ ಆರ್.ವಿ.ದೇಶಪಾಂಡೆ ಭೇಟಿ

ದಾಂಡೇಲಿ : ನಗರದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ನಗರ ಯೋಜನಾ ಪ್ರಾಧಿಕಾರ ಮತ್ತು ಆಶ್ರಯ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದ ಅಗಲಿದ ಬಾಬಾ ಮುಲ್ಲಾ ಅವರ ಮನೆಗೆ ಶಾಸಕರಾದ ಆರ್.ವಿ.ದೇಶಪಾಂಡೆಯವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮೃತರ ಕುಟುಂಬಸ್ಥರಿಗೆ ಸಾಂತ್ವನವನ್ನು ಹೇಳಿ ಧೈರ್ಯ ತುಂಬಿದರು. ಬಾಬಾ ಮುಲ್ಲಾ ಅವರ ಸುಪುತ್ರರಾದ ಸರ್ಪರಾಜ್ ಮುಲ್ಲಾ, ಅಬ್ದುಲ್ ಕರೀಂ ಮುಲ್ಲಾ ಮತ್ತು ಹತ್ತಿರದ ಸಂಬಂಧಿ ಅಕ್ರಂ ಖಾನ್ ಅವರೊಂದಿಗೆ ಕೆಲ ಹೊತ್ತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸಾಯಿ ಗಾಂವಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಆರ್.ಹೆಗಡೆ, ನಗರ ಸಭೆಯ ನಿಕಟಪೂರ್ವ ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ್ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.