ಯಲ್ಲಾಪುರ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ

ಯಲ್ಲಾಪುರ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಂಚಿಕೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗುಡ್ಡದಮನೆಯ ಅಜಯ್ ಶೇಕಪ್ಪ ವಡ್ಡರ್ (27) ಮೃತ ಯುವಕ. ಮಂಚಿಕೇರಿಯಲ್ಲಿ ಬಾಡಿಗೆ ಮನೆಯಲ್ಲಿ ವಾವಸವಾಗಿದ್ದ ಈತ ಗೌಂಡಿ ಕೆಲಸ ಮಾಡುತ್ತಿದ್ದ. ವಿಪರೀತ ಕುಡಿಯುವ ಚಟ ಹೊಂದಿದ್ದು, ಮನೆಯವರು ಬುದ್ಧಿವಾದ ಹೇಳಿದ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.