ಯಲ್ಲಾಪುರದಲ್ಲಿ ವ್ಯಸನಮುಕ್ತ ದಿನಾಚರಣೆಯ ಜಾಗೃತಿ ಜಾಥಾ

ಯಲ್ಲಾಪುರ: ಪಟ್ಟಣದಲ್ಲಿ ಡಾ.ಮಹಾಂತೇಶ ಶಿವಯೋಗಿಗಳ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾಡಳಿತ, ತಾ.ಪಂ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಪ.ಪಂ ಇವರ ಆಶ್ರಯದಲ್ಲಿ ವ್ಯಸನಮುಕ್ತ ದಿನಾಚರಣೆ ಜಾಗೃತಿ ಜಾಥಾ ನಡೆಯಿತು.

ತಹಸೀಲ್ದಾರ್ ಕಚೇರಿಯ ಆವಾರದಿಂದ ಆರಂಭವಾದ ಜಾಥಾ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಾ.ಪಂ ಆವಾರಕ್ಕೆ ಬಂದು ಸಂಪನ್ನಗೊAಡಿತು. ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು, ಅಧಿಕಾರಿಗಳು ಭಾಗವಹಿಸಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮ ನಡೆಯಿತು.

ಪ.ಪಂ ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ಗ್ರೇಡ್ 2 ತಹಸೀಲ್ದಾರ್ ಸಿ.ಜಿ.ನಾಯ್ಕ, ಬಿಇಒ ಎನ್.ಆರ್.ಹೆಗಡೆ, ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಮುಂತಾದವರಿದ್ದರು.