ಸಿದ್ದಾಪುರ : ಕ್ಷುಲ್ಲಕ ಕಾರಣಕ್ಕೆ ಶಿಕ್ಷಕಿಯೋರ್ವಳು ಮನನೊಂದು ಆತ್ಮಹತ್ಯೆ

ಸಿದ್ದಾಪುರ : ಕ್ಷುಲ್ಲಕ ಕಾರಣಕ್ಕೆ ಶಿಕ್ಷಕಿಯೋರ್ವಳು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಳಗಿನ ಸರಕುಳಿಯಲ್ಲಿ ನಡೆದಿದೆ. ನೇತ್ರಾವತಿ ಪುಟ್ಟ ಗೌಡ (41) ಕೆಳಗಿನಸರಕುಳಿ ತಟ್ಟಿ ಕೈ ಮೃತಪಟ್ಟ ಶಿಕ್ಷಕಿ.
ವಿವಾಹದ ನಂತರ ದಾಂಪತ್ಯ ಜೀವನ ಸರಿ ಬಾರದೆ ಗಂಡನಿಂದ ಡೈವೋರ್ಸ್ ಪಡೆದುಕೊಂಡು ತಾಯಿಯ ಮನೆಯಲ್ಲಿ ವಾಸವಿದ್ದು ಕಿಬ್ಬಳ್ಳಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು ಡೈವೋರ್ಸ್ ಆದಾಗಿನಿಂದ ಯಾರೊಂದಿಗೂ ಹೆಚ್ಚು ಬೆರೆಯುತ್ತಿರಲಿಲ್ಲ ಈ ಮದ್ಯೆ ತನ್ನ ತಾಯಿಯ ಅರೋಗ್ಯ ಸರಿ ಇಲ್ಲದೆ ಚಿಕಿತ್ಸೆ ಪಡೆಯುತ್ತಿದ್ದು ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಮನೆಯ ಮೇಲ್ಚಾವಣಿ ಗಳಕ್ಕೆ ಚೂಡಿದಾರದ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಘಟನೆಗೆ ಸಂಬಂದಿಸಿದಂತೆ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.