ಸಿದ್ದಾಪುರ : ಸೆಪ್ಟೆಂಬರ್ 9 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾನ ಮನಸ್ಕರ ವಿಶೇಷ ಸಭೆಯ ಕುರಿತು ಪೂರ್ವಭಾವಿ ಸಭೆ

ಸಿದ್ದಾಪುರ : ಸೆಪ್ಟೆಂಬರ್ 9 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾನ ಮನಸ್ಕರ ವಿಶೇಷ ಸಭೆಯ ಕುರಿತು ಪೂರ್ವಭಾವಿ ಸಭೆ ರಾಷ್ಟ್ರೀಯ ಈಡಿದ ಬಿಲ್ಲವ ನಾಮಧಾರಿ ಮಹಾಮಂಡಳಿ ವತಿಯಿಂದ ಬೆಂಗಳೂರಿನಲ್ಲಿಂದು ನಡೆಯಿತು.
ಮಹಾಮಂಡಳಿಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರಣವಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಸಭೆ ನಡೆಯಿತು.
ಅಂದು ಸಭೆಯಲ್ಲಿ ಕೈಗೊಳ್ಳಬೇಕಾದ ತೀರ್ಮಾನ ಮತ್ತು ಎಲ್ಲಾ ಜಿಲ್ಲೆಗಳಿಂದ ಬರುವ ಸಮಾಜ ಬಂಧುಗಳಿಗೆ ಸೂಕ್ತ ರೀತಿಯ ವ್ಯವಸ್ಥೆಗಳನ್ನು ಮಾಡಿಸುವಂತೆ ಹಾಗೂ ಸಭಾ ಕಾರ್ಯಕ್ರಮದ ತಯಾರಿ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ವಸಂತ ನಾಯ್ಕ್, ಉ. ಕ. ಜಿಲ್ಲಾಧ್ಯಕ್ಷ ವೀರಭದ್ರ ನಾಯ್ಕ್, ಸಿದ್ದಾಪುರ ತಾಲೂಕ ಅಧ್ಯಕ್ಷ ರಾಜೇಶ್ ನಾಯ್ಕ್ ಕತ್ತಿ, ಪ್ರಮುಖರಾದ ರಾಘವೇಂದ್ರ, ಪಾಂಡುರಂಗ ಮತ್ತಿತರರು ಉಪಸ್ಥಿತರಿದ್ದರು.