ಭಟ್ಕಳ ಪಿ.ಎಲ್.ಡಿ ಬ್ಯಾಂಕನ ನೂತನ ಅಧ್ಯಕ್ಷರಾಗಿ ಮಾಜಿ ಶಾಸಕ ಸುನೀಲ ನಾಯ್ಕ ಆಯ್ಕೆ

ಭಟ್ಕಳ: ಕೃಷಿ ಮತ್ತು ಗ್ರಾಮೀಣ ಸಹಕಾರಿ(ಪಿಎಲ್‌ಡಿ)ಬ್ಯಾಂಕಿನ ಅಧ್ಯಕ್ಷರಾಗಿ ಮಾಜಿ ಶಾಸಕ ಸುನೀಲ ಬಿ ನಾಯ್ಕ ಶಾಸಕ ಸುನೀಲ ಹಾಗೂ ಉಪಾಧ್ಯಕ್ಷರಾಗಿ ಸುರೇಶ ಜಟ್ಟಯ್ಯ ನಾಯ್ಕ ಅವಿರೋಧವಾಗಿ ಆಯ್ಕೆಯಾದರು.

ಸುನೀಲ ನಾಯ್ಕ ಮತ್ತೊಮ್ಮೆ ಬ್ಯಾಂಕಿನ ಅಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿದ್ದು, ಮೂರನೇ ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರೆ, ಉಪಾಧ್ಯಕ್ಷರಾಗಿ ಸುರೇಶ
ಜಟ್ಟಯ್ಯ ನಾಯ್ಕ ಆಯ್ಕೆಯಾದರು. ಕುಮಟಾದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಅಧಿಕಾರಿ ಭಾಸ್ಕರ ನಾಯ್ಕ ಅವರು ಚುನಾವಣಾಧಿಕಾರಿಯಾಗಿ ಅಧ್ಯಕ್ಷರ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ರಾಮ ಪೂಜಾರಿ, ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು.

ಈ ವೇಳೆ ಮಾಜಿ ಶಾಸಕ ಸುನೀಲ ನಾಯ್ಕರ ಅಭಿಮಾನಿಗಳು ಹಾರ ಹಾಕಿ ಸನ್ಮಾನಿಸಿ ಶುಭಾಶಯ ಕೋರಿದರು