ಸಿದ್ದಾಪುರ : ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನ ತಡೆಯುವಂತೆ ಕುರಿತು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಸಿದ್ದಾಪುರ : ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನ ತಡೆಯುವಂತೆ ಕುರಿತು ನಾಡದೇವಿ ಹೋರಾಟ ವೇದಿಕೆ ಸಿದ್ದಾಪುರ ಇವರು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ವೇದಿಕೆ ಅಧ್ಯಕ್ಷ ಅನಿಲ್ ಕೊಠಾರಿ ನೇತೃತ್ವದಲ್ಲಿ ಮನವಿಯನ್ನು ನೀಡಲಾಯಿತು. ರಾಜ್ಯದಲ್ಲಿ ಈ ಬಾರಿ ಮಳೆಗಾಲ ಅಪೂರ್ಣವಾಗಿದ್ದು ನೀರಿನ ಪ್ರಮಾಣ ಕಡಿಮೆ ಇರುತ್ತದೆ, ಸೆಪ್ಟೆಂಬರ್ ತಿಂಗಳಲ್ಲೇ ಅಲ್ಲಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಲಕ್ಷಣಗಳು ಕಂಡುಬರುತ್ತಿದೆ, ನೀರಿನ ಸಮಸ್ಯೆ ಉಂಟಾದರೆ ರಾಜ್ಯದ ರೈತರಿಗೆ ಬೆಳೆಗಳನ್ನು ಬೆಳೆಯಲು ಸಹ ಕಷ್ಟವಾಗಲಿದೆ ರೈತರ ಹಾಗೂ ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಕೈ ಬಿಡಬೇಕು ಒಂದು ವೇಳೆ ಕ್ರಮ ಕೈ ಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಮನವಿ ಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಹೇಂದ್ರ ನರಮುಂಡಿಗೆ, ಶ್ರೀಕಾಂತ್ ನಾಯ್ಕ್, ರಾಕೇಶ್ ಮುಗದುರ್ ಮತ್ತಿತರರು ಉಪಸ್ಥಿತರಿದ್ದರು.