ಸಿದ್ದಾಪುರ : ಯೋಧರ ಸಂಸ್ಮರಣೆ ಹಾಗೂ ಇಟಗಿ ಸ್ವಾತಂತ್ರ್ಯ ಕಥನದ ಲೋಕಾರ್ಪಣೆ ಕಾರ್ಯಕ್ರಮ

ಸಿದ್ದಾಪುರ : ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಇಟಗಿ ಗ್ರಾಮದ ಸ್ವಾತಂತ್ರ್ಯ ಯೋಧರ ಸಂಸ್ಮರಣೆ ಹಾಗೂ ಇಟಗಿ ಸ್ವಾತಂತ್ರ್ಯ ಕಥನದ ಲೋಕಾರ್ಪಣೆ ಕಾರ್ಯಕ್ರಮ ಸೆಪ್ಟೆಂಬರ್ 9 ರ ಶನಿವಾರದಂದು ಬೆಳಿಗ್ಗೆ 10.30 ಕ್ಕೆ ಹೊನ್ನೇಘಟಗಿ ಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಮರಣ ಸಮಿತಿ ಅಧ್ಯಕ್ಷ ಜೆ. ಪಿ. ಎನ್ ಹೆಗಡೆ ತಿಳಿಸಿದರು.
ಅವರು ಟಿ ಎಂ ಎಸ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಕಾರ್ಯಕ್ರಮ ದ ಉದ್ಘಾಟನೆಯನ್ನ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ್ ಮಾಡಲಿದ್ದಾರೆ ಪುಸ್ತಕ ಲೋಕಾರ್ಪಣೆ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ಎಸ್ ವೈದ್ಯ ನೆರವೇರಿಸಲಿದ್ದಾರೆ ಸ್ಥಳೀಯ ಸ್ವಾತಂತ್ರ್ಯ ಯೋಧರ ಕುಟುಂಬಸ್ಥರ ಸದಸ್ಯರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ನಾರಾಯಣ ಮೂರ್ತಿ ಹೆಗಡೆ, ಮಹಾಬಲೇಶ್ವರ ಹೆಗಡೆ, ಶ್ರೀಧರ್ ಹೆಗಡೆ ಉಪಸ್ಥಿತರಿದ್ದರು.